ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ವತಿಯಿಂದ ರಸ್ತೆ ಬಾರಿಕೇಡ್ ಅಳವಡಿಕೆ

June 19, 2025
Barricade

ಪಟ್ಟೆ ಬಡಗನ್ನೂರು: ಇಲ್ಲಿನ ಕೌಡಿಚ್ಚಾರು- ಮುಡಿಪುನಡ್ಕ-ಬೆಟ್ಟಂಪಾಡಿ ರಸ್ತೆಯ ಪಟ್ಟೆಯಲ್ಲಿ ರಸ್ತೆ ತಡೆ ಬಾರಿಕೇಡ್ಗಳನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವತಿಯಿಂದ ಅಳವಡಿಸಲಾಯಿತು. ಈಶ್ವರಮಂಗಲ ಆರಕ್ಷಕ ಹೊರಠಾಣಾ ವಲಯದ ಈ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ಕ್ರಮವನ್ನು ಕೈಗೊಳ್ಳಲಾಯಿತು. ರಸ್ತೆ ಬಾರಿಕೇಡ್ ಅಳವಡಿಕೆಯಿಂದಾಗಿ ವಿದ್ಯಾರ್ಥಿಗಳು ಸುರಕ್ಷಿತವಾಗಿ ರಸ್ತೆ ದಾಟಬಹುದು ಹಾಗೂ ಎಲ್ಲಾ ವಾಹನಗಳು ಶಾಲಾ ಪ್ರದೇಶದಲ್ಲಿ ನಿಧಾನವಾಗಿ ಚಲಿಸುವಂತಾಗಲು ಅನುಕೂಲವಾಗಲಿದೆ ಎಂದು ವಿದ್ಯಾಸಂಸ್ಥೆಗಳ ಪ್ರೌಢ ಶಾಲಾ ವಿಭಾಗದ ಮುಖ್ಯಗುರುಗಳಾದ ಶ್ರೀಮತಿ ಸುಮನಾ ಬಿ ಮಾತಾಜಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಗಳ ಸಂಚಾಲಕರಾದ ಶ್ರೀಮಾನ್ ವಿಘ್ನೇಶ್ ಹಿರಣ್ಯ, ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಶ್ರೀಮಾನ್ ರಾಜಗೋಪಾಲ ಎನ್, ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀಮಾನ್ ಮೋನಪ್ಪ ಎಂ ಉಪಸ್ಥಿತರಿದ್ದರು.

Website advt design

Related Blog

Surabhi Goshala
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು
parents meeting of sri krishna educational institutions english medium
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪೋಷಕರ ಸಭೆ
sri krishna educational institutions primary section parents meeting
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ಪೋಷಕರ ಸಭೆ