ಶಂಕರ ಜಯಂತಿ ಆಚರಣೆ

May 4, 2025
Shankara Jayanthi

ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ ಇದರ ಅಂಗಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನದ ವತಿಯಿಂದ ಶಂಕರ ಜಯಂತಿ ಆಚರಣೆ ದಿನಾಂಕ 3-5-2025ರಂದು ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದ್ವಾರಕಾ ಪ್ರತಿಷ್ಠಾನದ ಉಪಾಧ್ಯಕ್ಷರಾದ ಅಶ್ವಿನಿ ಜಿ.ಕೆ ಭಟ್ ಅವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಮಕುಂಜ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಚೇತನ್ ಮೊಗ್ರಾಲ್ ಅವರು ಶಂಕರಾಚಾರ್ಯರ ‘ಭಜಗೋವಿಂದಂ’ ಶ್ಲೋಕವನ್ನು ಉಲ್ಲೇಖಿಸಿ ಮಾತನಾಡಿದರು.
ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ತಾಳಮದ್ದಳೆ ಅರ್ಥಧಾರಿಗಳಾದ ಗಣರಾಜ ಕುಂಬ್ಳೆ ಅವರು ” ಭಾರತದಾದ್ಯಂತ ಸಂಚರಿಸಿ ಭಾರತೀಯ ಸಂಸ್ಕೃತಿಯ ಮಹತ್ವವನ್ನು ಸಾರಿದವರು ಶಂಕರಾಚಾರ್ಯರು ” ಎಂದು ತಿಳಿಸಿ ಅದ್ವೈತ ಸಿದ್ಧಾಂತದ ಬಗ್ಗೆ ವಿವರಿಸಿ ಮಾತನಾಡಿದರು.
ವೇದ ಶಿಬಿರದ ಶಿಬಿರಾರ್ಥಿ ಅಭಿನವ ರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ನೆರೆದ ಗಣ್ಯರನ್ನು ಹಾಗೂ ಸರ್ವರನ್ನೂ ಶ್ರೀಶ.ಆರ್ ಸ್ವಾಗತಿಸಿ ಪರೀಕ್ಷಿತ್ ಶರ್ಮ ಧನ್ಯವಾದ ಸಮರ್ಪಿಸಿದರು.
ನಿಶಾಂತ್.ಪಿ ಅವರು ನಿರೂಪಿಸಿದರು.

ಈ ಸಂದರ್ಭದಲ್ಲಿ ವಸಂತ ವೇದ ಶಿಬಿರದ ಶಿಬಿರಾರ್ಥಿಗಳಿಂದ ಗಣೇಶ ಪಂಚರತ್ನ ಹಾಗೂ ತೋಟಕಾಷ್ಟಕಂ ಶ್ಲೋಕಗಳ ಸಮೂಹ ಗಾಯನ ನೆರವೇರಿತು. ಶಂಕರಾಚಾರ್ಯರ ಕುರಿತಾದ ವೀಡಿಯೋ ದಾಖಲೀಕರಣವನ್ನು ಪ್ರದರ್ಶಿಸಲಾಯಿತು

Website advt design

Related Blog

Surabhi Goshala
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುತ್ತಿರುವ ಸುರಭಿ ಗೋಶಾಲೆ ದೇರ್ಲ ಇಲ್ಲಿ ಪ್ರತೀ ವರ್ಷದಂತೆ ಈ ಬಾರಿಯೂ ದೀಪಾವಳಿ ಗೋಪೂಜೆ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು
parents meeting of sri krishna educational institutions english medium
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಆಂಗ್ಲ ಮಾಧ್ಯಮ ವಿಭಾಗದ ಪೋಷಕರ ಸಭೆ
sri krishna educational institutions primary section parents meeting
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ಪೋಷಕರ ಸಭೆ